ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ಸಾಗರದಲ್ಲಿ ನವಜಾತ ಶಿಶು ಸಾವು !
ಸಾಗರ : ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತುಮರಿಯಲ್ಲಿ ನಡೆದಿದೆ. ತುಮರಿ ಸಮೀಪದ ಚದರವಳ್ಳಿ ಗ್ರಾಮದ ಚೈತ್ರಾ ಎನ್ನುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಅ್ಯಂಬುಲೆನ್ಸ್ ಇಲ್ಲದೇ ಖಾಸಗಿ ವಾಹನದಲ್ಲಿ ಗರ್ಭಿಣಿಯನ್ನು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಈ ವೇಳೆ ಮಹಿಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಡವಾಗಿ ಬಂದಿದ್ದರಿಂದ ತಾಯಿ- ಹಾಗೂ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದೆ. ಹೆಚ್ಚಿನ ಚಿಕಿತ್ಸೆಗೆ ಸಾಗರ ತಾಲೂಕು…


