Headlines

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ

ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ರಿಪ್ಪನ್ ಪೇಟೆಯಲ್ಲಿ ಅಕ್ಟೋಬರ್ 5 ರ ಮಂಗಳವಾರ ಉಚಿತ ಹೃದಯ ತಪಾಸಣ ಶಿಬಿರ

ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ  ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ…

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ  ಅಪಾಯದಮಟ್ಟ  ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ  ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ  ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ  ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ಭದ್ರಾವತಿ: ಕೆಎಸ್ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು

ಭದ್ರಾವತಿ : ಕೆಎಸ್ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಚಾಲಕ ಗಂಗಾಧರ್ (46) ಎಂಬವರೇ ನೇಣಿಗೆ ಶರಣಾದ ವ್ಯಕ್ತಿ. ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣಿಗೆ ಕೊರಳೊಡ್ಡುವ ಮುನ್ನ ಗಂಗಾಧರ್ ತಾನೇ ಹೂವಿನ ಹಾರ ಹಾಕಿಕೊಂಡಿದ್ದಾರೆ. ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More

ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಲಕ್ಷ್ಮಿ ನರಸಿಂಹ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More