Headlines

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕೆಂದು ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಶ್ರೀಗಳು, ಕೋಟ್ಯಂತರ ಜನರ ಶ್ರದ್ಧಾ ಕೇಂದ್ರದ ಮೇಲೆ ಮಾನಹಾನಿ ಮಾಡುವ ಕಾಯಕವನ್ನು…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More

ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ

ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…

Read More

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…

Read More

ಮಾಸ್ತಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಖಾಸಗಿ ಬಸ್ :

ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್’ಗೆ ಖಾಸಗಿ ಬಸ್ ಗುದ್ದಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು ಮನೆಯ ಮುಂಭಾಗದ ಕಾಂಪೌಡ್ ಪುಡಿಪುಡಿಯಾಗಿವೆ.  ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಹೋಗುತ್ತಿದ್ದ KA 20 ಸಿ 6293 ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೆ ಗುದ್ದಿದೆ. ಹಾನಿಗೊಳಗಾದ…

Read More