Headlines

ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ಕ್ಷುಲ್ಲಕ ವಿಚಾರಕ್ಕೆ “ಹುಚ್ಚಿ ಕಿರಣ್” ಹತ್ಯೆ !!!

ಶಿವಮೊಗ್ಗ : ನಗರದ ಹೊರವಲಯದಲ್ಲಿ ಓರ್ವನನ್ನ ಕೊಲೆ ಮಾಡಲಾಗಿದ್ದು ಆತನನ್ನ “ಹುಚ್ಚಿ ಕಿರಣ್” ಎಂದು ಗುರುತಿಸಲಾಗಿದೆ.  ಹೊಸಮನೆ ಏರಿಯಾದ ಹುಡುಗನಾಗಿರುವ ಈತನನ್ನ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯ ಕುಡಿಯಲು ತೆರಳಿದ್ದ ಕಿರಣ್ ಜೊತೆ ಇಬ್ಬರು ಸ್ನೇಹಿತರು ತೆರಳಿದ್ದು ಕುಡಿತದ ನಶೆಯಲ್ಲಿ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕಿರಣ್ ಮತ್ತು ಇಬ್ಬರ ಸ್ನೇಹಿರ ನಡುವೆ ಜಗಳ ಉಂಟಾಗಿದ್ದು ಸ್ನೇಹಿತರು ಬಿಯರ್ ಬಾಟಲಿಯಿಂದ ಒಡೆದು ಮತ್ತು ಕಲ್ಲಿಗೆ ಜಜ್ಜಿ  ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಮಾಡಿದವನನ್ನ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮತ್ತೋರ್ವನನ್ನು…

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

ಹೊಳೆಬಾಗಿಲು ಸಮೀಪ ಮೀನು ಹಿಡಿಯಲು ಹೋದ ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದಲ್ಲಿ  ತೆಪ್ಪದಲ್ಲಿ ಮೀನು ಹಿಡಿಯಲು ಹೋಗಿ ತೆಪ್ಪ ಮಗುಚಿದ ಕಾರಣ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ ಸಂಜೆ ವೇಳೆಗೆ ಯಲ್ಲಪ್ಪ ( 55 ) ಮೀನು ಹಿಡಿಯಲು ಕಣಿಕೆ ಗ್ರಾಮದ ಶರಾವತಿ ಹಿನ್ನೀರಿಗೆ ತೆರಳಿದ್ದಾರೆ.ದುರದೃಷ್ಟವಶಾತ್ ಮೀನು ಹಿಡಿಯಲು ಹೋದಾಗ ತೆಪ್ಪ ಮಗುಚಿ ಬಿದ್ದಿದ್ದರಿಂದ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಣಿಕೆ ಗ್ರಾಮದ ಬಳಿ ಶವ ತೇಲಿ ಬಂದಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ…

Read More

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ ಸಾಗರ: ಅಕ್ಟೋಬರ್  ೨೦೨೪ರಲ್ಲಿ ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ  ವೃದ್ದನನ್ನು ವಂಚಿಸಿ, ಅವರಿಂದ ಎಟಿಎಂ ಕಾರ್ಡ್ ನ ಪಿನ್ ಪಡೆದು ರೂ ೧,೪೯,೯೯೯ ಹಣವನ್ನು ಡ್ರಾ ಮಾಡಿಕೊಂಡ ಪ್ರಕರಣದ ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯದ ರೋಹನ್ ತಲ್ ಜಿಲ್ಲೆಯ  ಜೋಗಿಂದರ್ ಮತ್ತು  ಮುಖೇಶ್ (೪೮) ಇವರನ್ನು  ದಸ್ತಗಿರಿ ಮಾಡಿ, ಆರೋಪಿಗಳಿಂದ ಕಾರ್ಗಲ್ ಪೊಲೀಸ್ ಠಾಣೆ…

Read More

Hombuja | ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು

ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ಮಹೋತ್ಸವವು ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತೋಕ್ತ ಪೂಜೆ, ಆರಾಧನೆ, ಉತ್ಸವಾದಿಗಳು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿತ್ಯವಿಧಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವವು ಸಾಂಗವಾಗಿ ಏರ್ಪಟ್ಟಿತ್ತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More