Headlines

ರೈತ ಪರ ಹೋರಾಟಗಾರ ಕೆ ಸಿ ವೀರಭದ್ರಪ್ಪ ಗೌಡ ಕಗ್ಗಲಿ ನಿಧನ :

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಮೃತರು 8 ಜನ ಮಕ್ಕಳು,12 ಜನ ಮೊಮ್ಮಕ್ಕಳು ,7 ಜನ ಮರಿ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ರೈತ ಪರ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.ರೈತ ಪರ ಹೋರಾಟದಲ್ಲಿ ಇವರು ಬಳ್ಳಾರಿಯಲ್ಲಿ 21 ದಿನ ಜೈಲು ವಾಸ ಅನುಭವಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಕಗ್ಗಲಿ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 23 ಮತ್ತು 24 ರಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಮುಂದಿನ ತಿಂಗಳು ದೆಹಲಿ ಹಾಗೂ ಜಾರ್ಖಂಡ್…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…

Read More

RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ

ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ  ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….

Read More

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…

Read More

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿ.ಎಸ್​.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು…

Read More