Headlines

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹೆದ್ದಾರಿ ಅಗಲೀಕರಣ ಅಧಿಕಾರಿಗಳ ಎಡವಟ್ಟು – ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ : ಓರ್ವ ಗಂಭೀರ|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸದ್ಯ ರಸ್ತೆ ಅಗಲೀಕರಣ ಕಾಮಗಾರಿ ಜೋರಾಗಿ ನಡೆಯುತ್ತಿದೆ.ಶಾಸಕ ಹರತಾಳು ಹಾಲಪ್ಪ ರವರ ಅಣತಿಯಂತೆ ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದೆಯಾದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಇಂದು ರಸ್ತೆ ಅಗಲೀಕರಣ ಅವಾಂತರ ದಿಂದ ಎರಡು ಅಪಘಾತಗಳಾಗಿದೆ. ಒಂದು ಘಟನೆ ಗಣಪತಿ ಕೆರೆಯ ಬಳಿಯಲ್ಲಿ ಸಂಭವಿಸಿದರೆ, ಇನ್ನೊಂದು ಘಟನೆ ಬಸವನ ಹೊಳೆ ಬಳಿ ಸಂಭವಿಸಿದೆ.  ಬೈಕ್ ಅಪಘಾತ : ಇಂದು ಬೆಳಿಗ್ಗೆ ಟಿವಿಎಸ್​ ಎಕ್ಸ್​ಲ್ ಹಾಗೂ ಇನ್ನೊಂದು ಬೈಕ್​ನ ನಡುವೆ…

Read More

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ|araga

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ  ಮೂಲಭೂತ  ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಅಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು…

Read More

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ – ಸಾಮಾನ್ಯರೂ ಗೆಲ್ಲಬಹುದು ಸ್ವಂತ ಮನೆ

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ 40 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ !! ಕಂಟೈನ್ ಮೆಂಟ್ ಝೋನ್ ಘೋಷಣೆ !!

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ ನಲವತ್ತು ಮಕ್ಕಳಿಗೆ ಇದೀಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೊನ್ನೆ ಹಲವು ವಿದ್ಯಾರ್ಥಿಗಳಿಗೆ ರೋಗದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ 80 ಮಕ್ಕಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇವತ್ತು ಬಂದ ವರದಿಯಲ್ಲಿ 40 ಮಕ್ಕಳಿಗೆ ಇದೀಗ ಕೋರನ ಪಾಸಿಟಿವ್ ದೃಢಪಟ್ಟಿದೆ. ಸ್ಥಳಕ್ಕೆ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ರವರು ಭೇಟಿ ನೀಡಿ ಈ ವಿದ್ಯಾರ್ಥಿಗಳಿಗೆ ಬೇರೆ ರೂಮಿನ ವ್ಯವಸ್ಥೆ ಮಾಡಿದ್ದು ಹಾಗೂ ಪ್ರತಿನಿತ್ಯ ಇವರನ್ನು ನೋಡಿಕೊಳ್ಳಲು…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬೇಜವಾಬ್ದಾರಿಗೆ ಬಾಲಕಿ ಬಲಿ..!!

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..!! ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ. ರೈಲ್ವೆ ಟರ್ಮಿನಲ್ ನಿರ್ಮಾಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಆಳವಾದ ಗುಂಡಿಯನ್ನು ತೆಗೆದಿದ್ದರು.  ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ…

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More