Headlines

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ದೀಪಾವಳಿ ಸಂಭ್ರಮಕ್ಕೆ ಬೀಗರ ಮನೆಗೆ ಹೊರಟಿದ್ದ ಕುಟುಂಬದವರ ಮೇಲೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು!!!

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ  ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407  ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ. ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ…

Read More
Exit mobile version