Headlines

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More

ರಿಪ್ಪನ್‌ಪೇಟೆಯ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಪಟ್ಟಣದ ಜನರ ಹಲವು ವರ್ಷಗಳ ಬೇಡಿಕೆ ದ್ವಿಪಥ ರಸ್ತೆಗೆ  ರಾಜ್ಯ ಸರ್ಕಾರ ಸ್ಪಂದನೆ ನೀಡಿದ್ದು ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ  ಚಾಲನೆ ನೀಡಲಾಗುವುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಿಂದ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೆ ಹಾಗೂ ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶಬರೀಶನಗರದವರೆಗೂ ದ್ವಿಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸೆಪ್ಟೆಂಬರ್ ನಲ್ಲಿ…

Read More

ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ  ಏರ್ಪಡಿಸಿದ್ದ  ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ  ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

ರಿಪ್ಪನ್‌ಪೇಟೆ : ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ|labour

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮದಲ್ಲಿ ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಸೋಮವಾರ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ‌ ನೂತನ ಸಂಘವನ್ನು ರಚನೆ ಮಾಡಿ ಸಂಘದ ಅಧ್ಯಕ್ಷರನ್ನಾಗಿ ಮಹಮ್ಮದ್ ಹುಸೇನ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ :  ಅಧ್ಯಕ್ಷರು : ಮಹಮ್ಮದ್ ಹುಸೇನ್  ಉಪಾಧ್ಯಕ್ಷರು : ದೇವೇಂದ್ರ ಆಚಾರ್ ಮತ್ತು ಶೌಕತ್ ಗೌರವಾಧ್ಯಕ್ಷರು : ರಮೇಶ್ ಆರ್ ಕಾರ್ಯಾಧ್ಯಕ್ಷರು : ಪ್ರಭಾಕರ್ ಆಚಾರ್…

Read More

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ|loan app

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ಶಿವಮೊಗ್ಗ : ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಭದ್ರಾವತಿ ತಾಲೂಕಿನ ಉಕ್ಕುಂದ ನಿವಾಸಿ, ಆಟೋ ಚಾಲಕ ಸತೀಶ್ ಆ್ಯಪ್ ವೊಂದರ ಮೂಲಕ ಕಳೆದ 4 ತಿಂಗಳ ಹಿಂದೆ 06 ಸಾವಿರ ಸಾಲ ಪಡೆದಿದ್ದರು. ಆದರೆ ಈ ವೇಳೆ ಸತೀಶನ ಕೈಗೆ ಸಿಕ್ಕಿದ್ದ ನಾಲ್ಕುವರೆ (4,500)  ಸಾವಿರ ಮಾತ್ರ. ಪಡೆದ ಲೋನ್ ಹಣಕ್ಕೆ ಸತೀಶ್…

Read More