Headlines

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

Ripponpete | ಹೃದಯಾಘಾತದಿಂದ ಯುವಕ ಸಾವು

Ripponpete | ಹೃದಯಾಘಾತದಿಂದ ಯುವಕ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ. ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ…

Read More

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…

Read More

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers. ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ…

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More