Headlines

ರಿಪ್ಪನ್ ಪೇಟೆ:ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆ

ರಿಪ್ಪನ್ ಪೇಟೆ : ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆಯನ್ನು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ರಿಪ್ಪನ್ ಪೇಟೆ ಮತ್ತು ಹುಂಚ ಹೋಬಳಿಯ 42 ಬೂತ್ ಕೇಂದ್ರಗಳಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಎಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ…

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ!!!!! ನಿಜವಾಗಲೂ ನಡೆದಿದ್ದೇನು ಗೊತ್ತಾ??? ಈ ಸುದ್ದಿ ನೋಡಿ

ಸಾಗರ:ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ.ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ ಹಾಕಿ ಅವರ ಕಾರು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಮಂಜು ಅಂಡ್ ಟೀಂ ನಿಂದ ನಡೆದಿದೆ.ಎಂದು ತಿಳಿದು ಬಂದಿದೆ. ರಾಜನಂದಿನಿ ಅವರ ಕಾರು ಚಾಲಕ ಪ್ರಕಾಶ್ ಎಂಬುವರಿಗೆ ಅಡ್ಡಕಟ್ಟಿ, ಅವರಿಗೆ ಧಮ್ಕಿ ಹಾಕಿ ರಾಜನಂದಿನಿರವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪ್ರಕಾಶ್ ಕಾರನ್ನು ತ್ಯಾಗರ್ತಿಯಿಂದ ಮಳ್ಳಾ ಕ್ರಾಸ್ ವರೆಗೆ ಹಿಂಬಾಲಿಸಿಕೊಂಡು ಬಂದಿರುವ ಪ್ರಸಂಗ ವರದಿಯಾಗಿದೆ….

Read More

ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರೈತ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಗ್ಗಲಿ ವೀರಭದ್ರಪ್ಪ ಗೌಡರು 80 ರ ದಶಕದಲ್ಲಿ ರೈತ ಪರ ಹೋರಾಟದಲ್ಲಿ ಧಾರವಾಡ ಹಿಂಡಲಗಾ ಜೈಲಿನಲ್ಲಿ 21 ದಿನ ಜೈಲು ವಾಸ…

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು|special news

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು ಶಿವಮೊಗ್ಗ: ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ  ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್‌ಗೆ ಕಳೆದ ಎರಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು. ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಪ್ರೇಮಾಂಕುರವಾಗಿತ್ತು. ಹೀಗಾಗಿ ಸತ್ಯವತಿ ಹಾಗೂ ಫ್ರಾನ್ಸಿಸ್ ಹಿರಿಯರನ್ನು ಒಪ್ಪಿಸಿ ಭಾನುವಾರ ಮನೆಯಲ್ಲಿಯೇ ಸರಳವಾಗಿ ವಿವಾಹವಾದರು. ಆದರೆ ಸತ್ಯವತಿ ಪದವಿ ಕಾಲೇಜುವೊಂದರಲ್ಲಿ ಅಂತಿಮ…

Read More