Headlines

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More

ಹೊಂಬುಜ ಶ್ರೀಗಳಿಂದ ಮುಖ್ಯಮಂತ್ರಿ ಭೇಟಿ :

ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರವರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮನವಿ ಪತ್ರವನ್ನು ನೀಡಿದರು. ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಿನ ವ್ಯಾಪ್ತಿಯಲ್ಲಿ ಜೈನ ಬಾಂಧವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೊಂಬುಜ ಅತಿಶಯ ಮಹಾಕ್ಷೇತ್ರ ಜಗನ್ಮಾತೆಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಭಕ್ತರಿಗೆ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ಸಮುದಾಯದ ಏಳಿಗೆಗೆ ಸ್ಪಂದಿಸುವಂತೆ…

Read More

ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವಂತೆ ತೀರ್ಥಹಳ್ಳಿ ತಾಲೂಕು ಬಿಜೆಪಿ ಮುಖಂಡರಿಂದ ಒಕ್ಕೊರಲ ಮನವಿ:

ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ‌ ನೀಡುವಂತೆ ತಾಲೂಕಿನ 500ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ಇಂದು ಸಂಸದರಾದ ಬಿ.ವೈ.ರಾಘವೇಂದ್ರರನ್ನುಶಿಕಾರಿಪುರದ ಪ್ರವಾಸಿಮಂದಿರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.  ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿರುವ ಸ್ನೇಹಮಯಿ ವ್ಯಕ್ತಿತ್ವದ ಆರಗ ಜ್ಞಾನೇಂದ್ರ ರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…

Read More

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara

ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !? ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (05-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಮಾರುಕಟ್ಟೆ –   ವೆರೈಟಿ  – ಕನಿಷ್ಠ –   ಗರಿಷ್ಠ ಸಾಗರ       ಬಿಳೆಗೋಟು  15269   25489 ಸಾಗರ       ಚಾಲಿ             30299.  33199 ಸಾಗರ.     …

Read More
Exit mobile version