Headlines

ಆರ್​ಎಸ್​​ಎಸ್​​ ಬಾಂಬ್​ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆರ್​​ಎಸ್​ಎಸ್​​​ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್​ ಉಪ…

Read More

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More