Headlines

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿರಾಯ : ಆರೋಪಿ ಬಂಧನ

ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಇಂದು ನಡೆದಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣವೆಂದು ಶಂಕಿಸಲಾಗಿದೆ. ಕರುಣಾಕರ ಎಂಬ 33 ವರ್ಷದ ಎಂಬಿಎ ಪದವೀಧರ ಎರಡು ವರೆ ವರ್ಷದ ಹಿಂದೆ ಬುಳ್ಳಾಪುರದ ಯುವತಿ ಅಮಿತಾ(26) ಎಂಬಾಕೆಯೊಂದಿಗೆ ಮದುವೆಯಾಗಿದ್ದ. ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದರು ಮಕ್ಕಳಾಗಿರಲಿಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿಲ್ಲವೆಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ. ಪದೇ ಪದೇ ಜಗಳವಾಡುತ್ತಿದ್ದ ಪತಿಪತ್ನಿ ಕಳೆದ ವರ್ಷ ಗಂಡನ ಮನೆ ತೊರೆದು ಪತ್ನಿ ಅಮಿತಾ ತವರು ಮನೆ…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ…

Read More

ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest

ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…

Read More

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault)  ಕಾರು ಹಾಗೂ ವ್ಯಾಗನರ್‌(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್‌ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್‌ ಕಾರಿನ…

Read More

ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶ|illegal mining

ರಿಪ್ಪನ್‌ಪೇಟೆ : ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ರಿಪ್ಪನ್‌ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ರಾತ್ರಿ ಕೋಟೆತಾರಿಗದಲ್ಲಿ ಗಸ್ತು ತಿರುಗುತಿದ್ದಾಗ ಕೋಟೆತಾರಿಗ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಕೋಟೆತಾರಿಗ ಮಾರ್ಗವಾಗಿ ಸಾಗಿಸುತ್ತಿದ್ದ  KA 42 A 4115 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಶಿವಾನಂದ್ ಕೆ, ಹೆಚ್ ಸಿ…

Read More