Headlines

ಮಳಲಿ ಮಠದಲ್ಲಿ ಲೋಕಕಲ್ಯಾಣಾರ್ಥ ಇಷ್ಟಲಿಂಗ ಕಾರ್ತಿಕ ದೀಪೋತ್ಸವ ಧರ್ಮಸಮಾರಂಭ| malali matt

ಮಳಲಿಮಠದಲ್ಲಿ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ರಿಪ್ಪನ್‌ಪೇಟೆ:-ಸಮೀಪದ  ಮಳಲಿ ಮಠದಲ್ಲಿ ನವಂಬರ 26 ರಂದು ಸಂಜೆ 4 ಗಂಟೆಗೆ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭವನ್ನು  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ  ಏರ್ಪಡಿಸಲಾಗಿದೆ ಎಂದು  ಮಳಲಿಮಠದ  ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮಿಜಿ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಕಾರ್ತೀಕ ದೀಪೋತ್ಸವ ಸಮಾರಂಭವನ್ನು ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.ಸಮಾರಂಭದ ಆಧ್ಯಕ್ಷತೆಯನ್ನು  ಮಳಲಿಮಠದ…

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??

99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್​ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್​ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

ವಿಐಎಸ್‌ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಕರೆ ನೀಡಿದ್ದ ಭದ್ರಾವತಿ ಬಂದ್‌ ಯಶಸ್ವಿ|VSIL

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚುವ ನಿರ್ಧಾರದ ಬೆನ್ನಲ್ಲೇ ಗುತ್ತಿಗೆ ಕಾರ್ಮಿಕರು ಆರಂಭಿಸಿದ ಪ್ರತಿಭಟನೆ ಗುರುವಾರಕ್ಕೆ (ಫೆ.24) 37ನೇ ದಿನಕ್ಕೆ ಕಾಲಿಟ್ಟಿದೆ. ವಿಐಎಸ್‌ಎಲ್ ಮುಚ್ಚುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಆಕ್ರೋಶ ಗೊಂಡಿರುವ ಗುತ್ತಿಗೆ ಕಾರ್ಮಿಕರು ಗುರುವಾರ ಕರೆ ನೀಡಿರುವ ಭದ್ರಾವತಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಾರ್ಖಾನೆ ಜತೆಗೆ ತಮ್ಮನ್ನು ಉಳಿಸಿ ಎಂದು ಆಗ್ರಹಿಸಿ ವಿಐಎಸ್‌ಎಲ್ ಕಾರ್ಮಿಕರು ಕಳೆದ 37 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಮೊಗ್ಗ ಚಲೋ ನಡೆಸಿದ್ದ ಗುತ್ತಿಗೆ ಕಾರ್ಮಿಕರು, ಶಿವಮೊಗ್ಗ…

Read More

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…

Read More

ಆಸ್ತಿಯಲ್ಲಿ ಪಾಲು ಕೊಡದೇ ಎರಡನೇ ಮದುವೆಯಾದ ಅಪ್ಪ – ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಕ್ಕಳು|Murder mystery

ಆಸ್ತಿಯಲ್ಲಿ ಪಾಲು ಕೊಡದೆ, ಎರಡನೇ ಮದುವೆಯಾಗಿ ಮಗು ಮಾಡಿಕೊಂಡ ಅಪ್ಪನನ್ನು ಮೂವರು ಮಕ್ಕಳೇ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.  ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ನ. 29ರಂದು ಕೆಎಸ್‌ಆರ್‌ಪಿಯ ನಿವೃತ್ತ ಎಸ್‌ಐ ನಾಗೇಂದ್ರಪ್ಪ ಎಂಬವರ ಶವ ಚರಂಡಿಯಲ್ಲಿ ಸಿಕ್ಕಿತ್ತು. ಇವರು ಶಿರಾಳಕೊಪ್ಪದ ಬೋವಿ ಗ್ರಾಮದವರು. ಆಸ್ತಿ ವಿಚಾರದಲ್ಲಿ ಕೊಲೆ ಶಂಕಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ. ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಎಂಬವರಿಂದ…

Read More

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ ಶಿವಮೊಗ್ಗ: ತಮ್ಮ ಮಗಳನ್ನು ಭೇಟಿಯಾಗಲು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಶಿವಮೊಗ್ಗದ 63 ವರ್ಷದ ವೃದ್ಧೆ ಯೊಬ್ಬರು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಧ್ಯರಾತ್ರಿ ಮಾಂಗಲ್ಯ ಸರ ಕಳೆದುಕೊಂಡಿರುವ ಘಟನೆ ನಡೆದಿದೆ. ಪ್ರಯಾಣಕ್ಕಾಗಿ ಬಸ್ ಹತ್ತುತ್ತಿದ್ದಾಗ ನಿಲ್ದಾಣದಲ್ಲಿ ಭಾರೀ ಜನದಟ್ಟಣೆ ಇತ್ತು. ಜನದಟ್ಟಣೆಯ ಮಧ್ಯೆ ಬಸ್‌ನಲ್ಲಿ ಸೀಟು ಹಿಡಿಯಲು ಮುಂದಾಗಿದ್ದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ಬಸ್‌ನಲ್ಲಿ ಸೀಟು ಹಿಡಿದ ಬಳಿಕ ರಾತ್ರಿ…

Read More