Headlines

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ : ಯಡಿಯೂರಪ್ಪ ನಿವಾಸದಲ್ಲಿ ನೀರವ ಮೌನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಗಳು ಪದ್ಮಾವತಿಯವರ ಪುತ್ರಿ ಆಗಿರುವ ಸೌಂದರ್ಯ ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ…

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More

ರೈತನ ಹೊಟ್ಟೆಗೆ ತಿವಿದ ಕಾಡುಕೋಣ..!!! ಚಿಂತಾಜನಕ ಸ್ಥಿತಿಯಲ್ಲಿರುವ ರೈತ ಮಣಿಪಾಲ್ ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಅರಣ್ಯ ವಲಯದ  ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಬಳಿಯ ಅಸಿಮನೆಯಲ್ಲಿ ಕಾಡುಕೋಣವೊಂದು ರೈತರೊಬ್ಬರಿಗೆ ತಿವಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ. ಅಸಿಮನೆ ರಾಘವೇಂದ್ರ ಭಟ್ ಎಂಬುವರ ತೋಟಕ್ಕೆ ಬಂದಿದ್ದ ಕಾಡು ಕೋಣಗಳನ್ನು ರಾಘವೇಂದ್ರ ಭಟ್ ಮತ್ತು ಅವರ ಪತ್ನಿ ತೋಟದಿಂದ ಬೆರೆಸಲು ಹೋಗಿದ್ದಾಗ ಏಕಾಏಕಿ ಹೊಟ್ಟೆಗೆ ಇರಿದಿದೆ. ಗಂಭೀರ ಗಾಯಗೊಂಡ ರಾಘವೇಂದ್ರ ಭಟ್ ಅವರನ್ನು ಆಗುಂಬೆ ಭಾಗದ ಪ್ರಮುಖ ನಾಯಕ ಹಸಿರುಮನೆ ನಂದನ್ ಮತ್ತು ಸ್ನೇಹಿತರು ತಮ್ಮ…

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು…

Read More

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಜೇನುತುಪ್ಪ ಮತ್ತು ವಿನೆಗರ್ ತಯಾರಿಕಾ ಘಟಕಕ್ಕೆ ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂದು…

Read More
Exit mobile version