Headlines

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! 

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ…

Read More

ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು

A man was seriously injured after a scooter hit a cow at Avuka Circle near Garthikere. The injured was shifted to Shivamogga for advanced treatment. ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು…

Read More

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ

ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ ರಿಪ್ಪನ್ ಪೇಟೆ : ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ ಜಿ ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು ಶಿವಮಂದಿರದಲ್ಲಿ ಆಯೋಜಿಸಲಾದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಮತ್ತು ಈದ್‌ಮಿಲಾದ್ ಹಬ್ಬಗಳು ಶಾಂತಿ…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು

ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್‌ ನಲ್ಲಿ ಚರ್ಚ್‌ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ  ಹೊಡೆದಾಟ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು.  ನಡುವೆ ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

Read More

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More