ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ – ಗಿರೀಶ್ ಆಚಾರ್ |sand mafia
ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹಕ್ಕೆ ಗಿರೀಶ್ ಆಚಾರ್ ನಿರ್ಧಾರ ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ…