Headlines

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!!

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!! ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಜಾತ ಭಟ್ ಹಾಗೂ ಅವರ ಪುತ್ರಿ ಅನನ್ಯ ಭಟ್ ಬಗ್ಗೆ ದೇಶಾದ್ಯಂತ ಭಾರಿ ಸುದ್ದಿಯಲ್ಲಿದೆ. ಸುಜಾತ ಭಟ್ ಎಂಬ ಹೆಸರಿನ ಹಿಂದೆ ಹಲವು ಮರ್ಮಗಳಿವೆ.. 2003ರಲ್ಲಿ ಧರ್ಮಸ್ಥಳಕ್ಕೆ ಸ್ನೇಹಿತೆಯರೊಂದಿಗೆ ಬಂದಿದ್ದ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯ ಮೇಲೆ ಅತ್ಯಾಚಾರವಾಗಿರಬಹುದು  ಎಂದು ಸುಜಾತ ಭಟ್ ದೂರು…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ! Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ…

Read More

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!!

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!! ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ವ್ಯಾಪ್ತಿಯ ಮುಡುಬ ಬೈರಾಪುರ ಭಾಗದಲ್ಲಿ ಭೂಮಿಗಡಿಯಲ್ಲಿ ಪರಂಪರೆಯಾಗಿ ಪ್ರತಿಷ್ಠಾಪಿಸಲಾಗಿದ್ದ ಪಂಚಲೋಹದ ದೇವರ ಮೂರ್ತಿಗಳು ಕಳವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರತಿವರ್ಷ ದೀಪಾವಳಿ ಹಬ್ಬದ ನೋನಿ ಆಚರಣೆಯ ಅಂಗವಾಗಿ ಗ್ರಾಮಸ್ಥರು ಬನಕ್ಕೆ ತೆರಳಿ ಕಳೆದ ವರ್ಷ ಮಡಿಕೆಯಲ್ಲಿ ಇಟ್ಟು ಭೂಮಿಗೆ ಮುಚ್ಚಿ ಇರಿಸಿದ್ದ ಮೂರ್ತಿಗಳನ್ನು ಹೊರತೆಗೆದು ಪೂಜೆ ಸಲ್ಲಿಸುವುದು ಪರಂಪರೆಯಾಗಿತ್ತು , ಇದೇ ಪ್ರಕಾರ …

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ ರಿಪ್ಪನ್ ಪೇಟೆ – ಇಲ್ಲಿನ ಹೊಸನಗರ ರಸ್ತೆಯ ಶರ್ಮಣ್ಯಾವತಿ ಹೊಳೆಯ ಸಮೀಪದ ತಿರುವಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಯುವಕನೊಬ್ಬನಿಗೆ ಗಂಭೀರ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗದಿಂದ ಹೊಸನಗರಕ್ಕೆ ಶಿಕ್ಷಕರೊಬ್ಬರು ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಹಿರೈಮೈಥೆ ಗ್ರಾಮದ ಯುವಕನೊಬ್ಬ ಚಲಾಯಿಸುತಿದ್ದ ಬೈಕ್ ನಡುವೆ ಗವಟೂರು ಹೊಳೆ (ಶರ್ಮಣ್ಯಾವತಿ ಹೊಳೆ) ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾದ ಬೈಕ್ ನ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ 9 ಕಾಲೇಜು 4 ಶಾಲೆಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚಳದ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಒಂಬತ್ತು ಕಾಲೇಜುಗಳು ಹಾಗೂ ನಾಲ್ಕು ಶಾಲೆಗಳಿ ರಜೆ ಘೋಷಿಸಲಾಗಿದೆ. ಮಕ್ಕಳಲ್ಲಿ ಕೊರೋನ ಹೆಚ್ಚಳವಾದರೆ ಕ್ಲಸ್ಟರ್ ರೀತಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊರೋನ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಈಶ್ವರಪ್ಪ ಇಂದು ಸಂಜೆ ಯಾವ ಯಾವ ಶಾಲೆಗಳು ನಾಳೆ ರಜೆ ಘೋಷಿಸಲಿವೆ ಎಂದು ತಿಳಿಸಿದ್ದರು. ಅದರಂತೆ ರಾಗಿಗುಡ್ಡದ ಅಂಬೇಡ್ಕರ್ ವಸತಿ ಶಾಲೆ, ಮುರಾರ್ಜಿ ಶಾಲೆ, ಮುರಾರ್ಜಿ ಕಾಲೇಜು, ತೀರ್ಥಹಳ್ಳಿಯ ಬಸವಾನಿ,…

Read More

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ ರಿಪ್ಪನ್‌ಪೇಟೆಯಲ್ಲೇ ಸಿಗುತ್ತಿದೆ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ! Discover Arogya Health Care in Ripponpete, led by London-educated Dr. Sumanth Kohima. Providing expert family medicine, advanced lab facilities, ECG, and successful diabetes management for the rural community. ​ರಿಪ್ಪನ್‌ಪೇಟೆ:ಪಟ್ಟಣದ ಸಾಗರ ರಸ್ತೆಯ ವಿನಾಯಕ ವೃತ್ತದಲ್ಲಿರುವ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More