Headlines

ಮುಖ್ಯಮಂತ್ರಿಗಳಿಂದ ಸಾಗರ ತಾಲ್ಲೂಕಿನಲ್ಲಿ 459.19 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಸಾಗರ:ತಾಲ್ಲೂಕಿನ ಹಲವು ಕಾಮಗಾರಿಗಳಿಗೆ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ರವರು ಚಾಲನೆ ನೀಡಿದರು.   ಅವರು ಇಲ್ಲಿನ ಗಾಂಧಿಮಂದಿರದ ಹೊರಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.  ಇರುವಕ್ಕಿ ಕೃಷಿ ವಿಶ್ವ ವಿದ್ಯಾಲಯ 155-00 ಕೋಟಿ ರೂಪಾಯಿಗಳು, ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ 165-00ಕೋಟಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206 (69) ತುಮಕೂರು ಹೊನ್ನಾವರ ರಸ್ತೆಯ ಕಿ.ಮೀ. 278 ರಿಂದ 286.40ರವರೆಗೆ ಸಾಗರ ನಗರ ವ್ಯಾಪ್ತಿಯಲ್ಲಿ…

Read More

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :

 ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…

Read More

SSLC ಪಾಸಾದವರಿಗೆ ಗುಡ್ ನ್ಯೂಸ್ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ವಯೋಮಿತಿ 18 ರಿಂದ 40 ವರ್ಷಗಳು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು…

Read More

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ! ಕೊಲೆಯಾಗಿದ್ದಾಳೆ ಎಂದುಕೊಳ್ಳಲಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ ಮೈಸೂರು – ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ, ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಎರಡು ವರ್ಷ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಪತಿಯು ಈಚೆಗಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ನಾಲ್ಕು ವರ್ಷದ ಹಿಂದೆ ಕೊಲೆಯಾಗಿದ್ದಾರೆ ಎಂದು ಸುದ್ದಿಯಾಗಿದ್ದ ಮಹಿಳೆ ಮಲ್ಲಿಗೆ, ಪ್ರಿಯಕರ ಗಣೇಶ್‌ನೊಂದಿಗೆ ಪತ್ತೆಯಾಗಿದ್ದು, ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ|high- temperature

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ ರಿಪ್ಪನ್‌ಪೇಟೆ;-ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ ಕುಮದ್ವತಿ ಶರ್ಮಿನಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-40 ಡಿಗ್ರಿಯಷ್ಟು ಬಿಸಿಲಿನ ಝಳಕ್ಕೆ ರೈತ ನಾಗರೀಕರು ತತ್ತರಿಸಿದ್ದಾರೆ.ಕುಡಿಯಲು…

Read More

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…

Read More