Headlines

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು.!?

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!? Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police. ​ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಮಂಗನಕಾಯಿಲೆಗೆ ಗ್ರಾಮಪಂಚಾಯಿತಿ ಸದಸ್ಯ ಬಲಿ!!!

ಸಾಗರ :  ತಾಲ್ಲೂಕಿನ ಅರಳಗೋಡಿನಲ್ಲಿ ಮಂಗನ ಕಾಯಿಲೆಗೆ ಅಲ್ಲಿನ ಗ್ರಾಮಪಂಚಾಯ್ತಿ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ. 55 ವರ್ಷದ ರಾಮಸ್ವಾಮಿ ಕರುಮನೆ ಎಂಬುವರು ಮೃತರು. ಕಳೆದ ಎಪ್ರಿಲ್​ 24 ರಂದು ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಜ್ವರ ಇನ್ನೂ ಹೆಚ್ಚಾದ ಕಾರಣ ಹೀಗಾಗಿ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಸ್ವಾಮಿಯವರು ಇಂದು  ಮಧ್ಯಾಹ್ನ ದ  ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ. 

Read More

ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿ : ತಾಲ್ಲೂಕಿನ ಕಡದಕಟ್ಟೆಯ ನವಚೇತನ ಕನ್ನಡ ಹಿ.ಪ್ರಾ.ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ್ ಫೌಂಡೇಶನ್  ವತಿಯಿಂದ ಡಾ.ಪಾಟೀಲ್ ಪುಟ್ಟಪ್ಪ  ಸಭಾಭವನದ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಹಾಗೂ ಕನ್ನಡ ಸಾಹಿತ್ಯದ ಸೇವೆ ಸಾಧನೆ ಪರಿಗಣಿಸಿ ಸಿ.ಎಚ್.ನಾಗೇಂದ್ರಪ್ಪರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More