Headlines

ರಿಪ್ಪನ್ ಪೇಟೆ ಯಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರ :

ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ   ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.  ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ  ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ…

Read More

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಸಾಗರ ನಗರಸಭೆ ವಿರುದ್ದ ಪ್ರತಿಭಟನೆ ನಡೆಸಿದ್ದ ಹೋರಾಟಗಾರನಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷರಿಂದ ಧಮ್ಕಿ : ಆಡಿಯೋ ವೈರಲ್

ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದರು ಈ ಸಂಧರ್ಭದಲ್ಲಿ ಅವರಿಗೆ ಬೆಂಬಲಿಸಿದ ಹೋರಾಟಗಾರ ಅನ್ವರ್ ಭಾಷಾ ರವರಿಗೆ ನಗರಸಭೆ ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ನಾಗರಾಜ್ ರವರು ಕರೆ ಮಾಡಿ ಧಮ್ಕಿ ಹಾಕಿದ್ದಾರೆ ಎನ್ನುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕೋ ಏನೋ ಇತ್ತೀಚೆಗೆ ಸಾಗರ ನಗರಸಭೆ ಜಿಲ್ಲೆಯಲ್ಲಿ…

Read More

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದೆ. ಈ ಸಮೀಕ್ಷೆಯನ್ನು ಯಶಸ್ವಿಯಾಗಿ ಮುನ್ನಡೆಸಲು ರಾಜ್ಯದ ಸರ್ಕಾರಿ ಶಿಕ್ಷಕರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಯಾದ ಎಂ. ರಂಗನಾಥ್ ಅವರು ಕರ್ತವ್ಯಕ್ಕೆ ಗೈರುರಾಗಿದ್ದ ಕಾರಣದಿಂದ ಅಮಾನತುಗೊಳಿಸಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಎಂ. ರಂಗನಾಥ್ ಅವರು…

Read More

ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ ಹೆಣ್ಣು ಅಪ್ರಾಪ್ತ ವಯಸ್ಸಿನವಳಾಗಿದ್ದಳು.ಈಗ ವಧುವರ, ಮದುವೆ ಮಾಡಿಸಿದ್ದ ಅರ್ಚಕ, ಆಹ್ವಾನ ಪತ್ರಿಕೆ ಮುದ್ರಿಸಿದ ವ್ಯಕ್ತಿ, ಫೋಟೋಗ್ರಾಫರ್, ವಧು ವರರ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಆನಗದ್ದೆ ಗ್ರಾಮದ ಯಲ್ಲದೋಣೆಯ ರಮೇಶ್ ಎಂಬುವವನು ಬಳ್ಳಾರಿ ತಾಲೂಕಿನ ಕೂಡ್ಲಿಗಿ ಗ್ರಾಮದ‌ ಅಪ್ರಾಪ್ತೆ ಬಾಲಕಿಯನ್ನ ಮಾ.28 ರಂದು ಮದುವೆಯಾಗಿರುತ್ತಾನೆ.  ಈ ಬಗ್ಗೆ ಬಂದ ದೂರು…

Read More

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja

ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ  ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…

Read More
Exit mobile version