Headlines

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…

Read More

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ. ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ….

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More

ಸಾಗರ : ಮಹಿಳೆಗೆ ಅಮಿಷವೊಡ್ಡಿ ಮತಾಂತರಕ್ಕೆ ಯತ್ನ :ಇಬ್ಬರ ಬಂಧನ

ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ಜೋಗ್‌ಫಾಲ್ಸ್‌ನ ಅನಿಲ್ ಕುಮಾರ್ ಹಾಗೂ ಪತ್ನಿ ಪ್ರಶಾಂತಿ ಅವರನ್ನು ಬಂಧಿಸಲಾಗಿದೆ. ಜ್ಯೋತಿ ಎಂಬುವವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ.  ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕೋಮು ಗಲಾಟೆ – ನಾಲ್ವರಿಗೆ ಗಾಯ|crime

ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಅಪ್ರಾಪ್ತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಅನ್ಯಕೋಮಿನವರಿಂದ ಹಲ್ಲೆ ನಡೆದಿದೆ. ವೇಗವಾಗಿ ಹಾಗೂ ನಿರ್ಲಕ್ಷದಿಂದ…

Read More

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್‌ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi

ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನ‌ಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ.  ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More