Headlines

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ|volleyball

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ….

Read More

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read More

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…

Read More

ರಿಪ್ಪನ್ ಪೇಟೆ : ಎರಡು ತಿಂಗಳು ಜೀವನ್ಮರಣ ಹೋರಾಟ ನಡೆಸಿದ್ದ ಮಗು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ್ದ ಹಸುಗೂಸು  ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಹದಿನೈದು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More

RIPPONPETE | ಮರ ಕಟಾವು ವೇಳೆ ಉರುಳಿ ಬಿದ್ದ ಕ್ರೇನ್‌: ತಪ್ಪಿದ ಭಾರಿ ಅನಾಹುತ

A major accident was averted after a crane overturned during tree cutting operations near Shivamandir in Ripponpete on Wednesday evening. No casualties were reported. ರಿಪ್ಪನ್‌ಪೇಟೆ: ಪಟ್ಟಣದ ಶಿವಮಂದಿರದ ಸಮೀಪ ಇಂದು ಸಂಜೆ ಮರ ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಕ್ರೇನ್‌ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

Read More

ಬಂಧಿತರಾಗಿರುವ ಶಂಕಿತ ಉಗ್ರರದ್ದು ತೀರ್ಥಹಳ್ಳಿಯ ಮೂಲ ಹೌದು ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು : ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. ತೀರ್ಥಹಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂಧರ ಪರಿಚಯದಿಂದ ಈ ರೀತಿಯಾಗಿದೆ.ಬಂಧಿತ ಶಂಕಿತ ಉಗ್ರರಿಗೆ ಕರಾವಳಿ, ಕೇರಳ ಲಿಂಕ್ ಇದೆ. ಹೀಗಾಗಿಯೇ ಇಂತಹ ಕೃತ್ಯ ನಡೆಯುತ್ತಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಪೋನ್ ಬಳಕೆ ಸಹ ಆಗಿದೆ. ನಮ್ಮ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು. ಈ ಹಿಂದೆ…

Read More
Exit mobile version