Headlines

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಅನಾರೋಗ್ಯ ಪೀಡಿತ ವ್ಯಕ್ತಿಗೆ ಆರ್ಥಿಕ ನೆರವು ನೀಡಿದ ಶಾಸಕ ಹರತಾಳು ಹಾಲಪ್ಪ

 ಹೊಸನಗರ ತಾಲೂಕ್ ವೀರಶೈವ ಲಿಂಗಾಯಿತ ಪರಿಷತ್ ನ ಮಾಸಿಕ ಸಭೆ ಆಲಗೇರಿ ಮಂಡ್ರಿಯ ದಯಾಕರ ಎಂಬುವವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಪರಿಷತ್ ನಡೆಸುತ್ತಿರುವ ಸಮಾಜಮುಖಿ ಕಾರ್ಯವನ್ನು ಪ್ರಶಂಸಿದರು. ನಂತರ ಇತ್ತೀಚೆಗೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಅಕಸ್ಮಿಕವಾಗಿ ಅವಘಡ ಸಂಭವಿಸಿ ಓಡಾಡದಂತಹ ಸ್ಥಿತಿಯಲ್ಲಿರುವ ರೈತ ಉಮೇಶ್ ಎಂಬುವರಿಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವೈಯಕ್ತಿಕವಾಗಿ…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…

Read More

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು. ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್‌ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…

Read More

26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….

ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…

Read More