Headlines

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ರಾಮತೀರ್ಥದಲ್ಲಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ಧ ಅಗಸ್ತ್ಯ ಮಹರ್ಷಿಗಳ ಪುಣ್ಯಾಶ್ರಮವಾದ ಶರ್ಮೀಣ್ಯಾವತಿ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 40ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಏರ್ಪಡಿಸಲಾಗಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನದ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 8.00 ಗಂಟೆಯಿಂದ ಪ್ರಧಾನ ಪುರೋಹಿತರಾದ ಕೆಂಜಿಗಾಪುರದ ಶ್ರೀಧರ್ ಭಟ್, ಶ್ರೀ ಸತ್ಯನಾರಾಯಣ…

Read More

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rainfall has prompted the Teerthahalli Tahsildar to declare a holiday for all Anganwadi centres, government, aided and private schools and colleges across Teerthahalli Taluk on July 7, 2026. ತೀರ್ಥಹಳ್ಳಿ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…

Read More

ಮರವೇರಿ ಕುಳಿತಿದ್ದ ಹೆಬ್ಬಾವು – ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಉರಗತಜ್ಞ | Python

ಮರವೇರಿದ್ದ ಹೆಬ್ಬಾವನ್ನು ಸೆರೆ ಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಘಟನೆ ಸೊರಬ ತಾಲೂಕಿನ ಜೇಡಗೇರಿ ಸಮೀಪದಲ್ಲಿ ನಡೆದಿದೆ. ಜೇಡಗೇರಿ-ಚೀಲನೂರು ಸಮೀಪದ ಜೋಳದ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲೇ ಮರವನ್ನೇರಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಮಾರ್ಕೆಟ್ ರಸ್ತೆಯ ಸ್ನೇಕ್ ಅಯಾಝ್ ಮರವನ್ನೇರಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಹೆಬ್ಬಾವನ್ನು ವೀಕ್ಷಿಸಿದರು. ಉಪವಲಯ ಅರಣ್ಯಾಧಿಕಾರಿ ಪರಶುರಾಮ್ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

Read More

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ   ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ  ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ದಾವಣಗೆರೆ: ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ:ನಾಲ್ವರ ಬಂಧನ

ದಾವಣಗೆರೆ: ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಇಲ್ಲಿನ ಬಸವರಾಜಪೇಟೆ ನಿವಾಸಿ ಸೀಮೆಎಣ್ಣೆ ಪರಮೇಶ್(43) ತಮ್ಮ ಮನೆ ಪಕ್ಕದ ಬೀದಿ ಹುಬ್ಬಳ್ಳಿ ಚೌಡಪ್ಪ ಗಲ್ಲಿಯಲ್ಲಿರುವ ಪರಿಚಿತರ ಮನೆಗೆ ಹೋಗಿ ಬರುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಪರಮೇಶ್‍ಗೆ ಹೊಡೆದು ಕೆಳಗೆ ಬೀಳಿಸಿದ್ದಾರೆ. ನಂತರ ಪರಮೇಶ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಪರಮೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಹಿಂದೆ…

Read More

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ :

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌…

Read More

ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು.  ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More
Exit mobile version