ಶಿವಮೊಗ್ಗದಲ್ಲಿ ಯಾವುದೇ ಎನ್ಕೌಂಟರ್ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots
ಶಿವಮೊಗ್ಗದಲ್ಲಿ ಯಾವುದೇ ಎನ್ಕೌಂಟರ್ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್ಕೌಂಟರ್ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್ಕೌಂಟರ್ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…