Headlines

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ – ಮಳಲಿಮಠದ ಶ್ರೀಗಳ ಪಟ್ಟಾಧಿಕಾರದ ರಜತ ವರ್ಧಂತಿ ಮಹೋತ್ಸವ ರಿಪ್ಪನ್‌ಪೇಟೆ;-ಧರ್ಮ ಪ್ರಸಾರದೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು ಹೊಸ ಹೊಸ ಅವಿಷ್ಕಾರದೊಂದಿಗೆ ಮಳಲಿಮಠದ ಪಟ್ಟಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಕೃಷಿ ಕ್ರಾಂತಿಯಲ್ಲಿ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದಾರೆ. ಧರ್ಮದ ದೇವ ತಪೋ ಭೂಮಿ ಭಾರತ. ದೇವರು ಮತ್ತು ಧರ್ಮದಲ್ಲಿ ನಂಬಿಕೆಯಿಟ್ಟ ಈ ನಾಡು ಪವಿತ್ರ ಪುಣ್ಯ ಭೂಮಿಯಲ್ಲಿ ಹಲವಾರು ಧರ್ಮಗಳು ಮೈದಾಳಿ ಬಂದಿವೆ. ಅನೇಕ ಧರ್ಮಗಳಲ್ಲಿ ವೀರಶೈವ ಧರ್ಮವು ಒಂದಾಗಿದೆ.ಪರಶಿವನಿಗೆ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

Ripponpet | ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಸಾವಿರ ಭಾರಿ ಸೋಲುಂಡರು ಚಿಂತಿಸದೇ  ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ರಿಪ್ಪನ್‌ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ  ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ….

Read More

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹೊಸನಗರ : ಪ್ರತಿಯೊಬ್ಬರೂ ನಾಡು, ನುಡಿಗೆ ಅರ್ಥ ಕಲ್ಪಿಸಿ ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಪಿಎಸ್‌ಐ ಶಿವಾನಂದ ಕೋಳಿ ತಿಳಿಸಿದರು. ಕರ್ನಾಟಕ ರಾಜ್ಯದ ಏಕೀಕರಣ ಹಿನ್ನಲೆಯಲ್ಲಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆತ್ತ ತಾಯಿಗೆ ಸಮನಾದ ನಾಡು, ನುಡಿ, ಭಾಷೆಯ ವಿಷಯದಲ್ಲಿ ನಾಡಿನ ಸಮಸ್ತ ಜನತೆ ಒಗ್ಗೂಡಿ, ಪ್ರಾಮಾಣಿಕವಾಗಿ…

Read More

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು  ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…

Read More