Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು
ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು ರಿಪ್ಪನ್ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಎತ್ತರಕ್ಕೆ ಬೆಳೆಸುವಂತೆ ಆಗಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…