Headlines

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ

 ‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’  ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…

Read More

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 :  :  ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ಅಚರಿಸಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ

SHIVAMOGGA | KSRTC bus-bike accident near Pesit College SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ SHIVAMOGGA | KSRTC bus-bike accident near Pesit College ಶಿವಮೊಗ್ಗ: ನಗರದ ಪೆಸಿಟ್ ಕಾಲೇಜು ಸಮೀಪ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಿರಿಗೆರೆ ಮೂಲದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸುಮಾರು 8ರಿಂದ 10…

Read More

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…

Read More