Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More

2026 ಪ್ರಿಪೇರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಕ್ಕಳ ಭವಿಷ್ಯದ ಮೇಲೆ ನಡೆದ ದಾಳಿ – ಭಾವುಕ ಮನವಿ

2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಿಕ್ಷಣ ಇಲಾಖೆಯ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಾಹಿತಿ ಮೈನಾನಾಸೀರ್ ಕಾರ್ಗಲ್ ಅವರ ಭಾವುಕ ಮನವಿ. ಒಂದು ನೋವಿನ ಮನವಿ – ಮಕ್ಕಳ ಭವಿಷ್ಯಕ್ಕಾಗಿ.. 2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಡೀ ರಾಜ್ಯದಲ್ಲಿ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಿದ ಕ್ಷಣದಿಂದ ಮನಸ್ಸು ಭಾರವಾಗಿ ಕುಸಿದಿದೆ. ಇದು ಕೇವಲ ಒಂದು ಸುದ್ದಿ ಅಲ್ಲ…ಇದು ಸಾವಿರಾರು ಮಕ್ಕಳ ಕನಸುಗಳ ಮೇಲೆ ಬಿದ್ದ ಬಿರುಕು. ಬೆಳಗ್ಗಿನಿಂದ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ. ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ Renowned Ganapati idol sculptor Harnahalli Shivanandappa of Ripponpet passed away due to age-related illness. Known for crafting iconic idols for over 50 years, his demise marks the loss of a rich artistic and devotional legacy. ​ರಿಪ್ಪನ್‌ಪೇಟೆ: ತಮ್ಮ ಕೈಚಳಕದಿಂದ ಮಣ್ಣಿನಲ್ಲಿ ಅದ್ಭುತ ಕಲಾಕೃತಿಗಳನ್ನು ಅರಳಿಸುತ್ತಿದ್ದ, ದಶಕಗಳ ಕಾಲ ಭಕ್ತರ ಮನಸ್ಸಿನಲ್ಲಿ ಭಕ್ತಿಯ…

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…

Read More

ಎತ್ತುಗಳ ಮೈ ತೊಳೆಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು:

ಹೊಸನಗರ: ತಾಲೂಕಿನ ನಗರ ವ್ಯಾಪ್ತಿಯ ಬೇಳೂರು ಸಮೀಪದ ಹೆಣ್ಣೆಬೈಲಿನ ಶರಾವತಿ ಹಿನ್ನೀರಿನಲ್ಲಿ ಎತ್ತುಗಳ ಮೈತೊಳೆಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಶುಕ್ರವಾರ ನಡೆದಿದೆ. ಮೃತನನ್ನು ಬೇಳೂರು ಗ್ರಾಮದ ಸುರೇಶ್ (48) ಎಂದು ಗುರುತಿಸಲಾಗಿದೆ. ಜ.14 ರಂದು ಈತನು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಎತ್ತುಗಳ ಮೈತೊಳೆಯುವ ಸಲುವಾಗಿ ಶರಾವತಿ ಹಿನ್ನೀರು ಪ್ರದೇಶಕ್ಕೆ ಬಂದಾಗ ಈ ಘಟನೆ ನಡೆದಿದೆ. ಗ್ಯಾಂಗ್ರಿನ್ ನಿಂದಾಗಿ ಮೃತ ಸುರೇಶ್ ಅವರ ಒಂದು ಕಾಲನ್ನು ಕತ್ತರಿಸಿ ತೆಗೆಯಲಾಗಿತ್ತು. ಹೀಗಾಗಿ ನೀರಿನಲ್ಲಿ ಬಿದ್ದ ಅವರಿಗೆ ಮೇಲೆ…

Read More