ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…