ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli
ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…


