Headlines

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

ಪುನೀತ್ ರಾಜಕುಮಾರ್ ನಾಮಫಲಕವನ್ನು ಅಳಿಸಿದ ಕಿಡಿಗೇಡಿಗಳು:: ಕಿಡಿಗೇಡಿಗಳ ಬಂಧನಕ್ಕೆ ಕಸ್ತೂರಿ ಕನ್ನಡ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಯ :

ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು. ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ.  ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ :  ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್…

Read More

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ:

ಶಿವಮೊಗ್ಗ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್ ಪಕ್ಕದ ಚಾನಲ್ ಏರಿ ಮೇಲ್ಭಾಗ , ನಾಗಪ್ಪ ದೇವಸ್ಥಾನ ಮತ್ತು ಮಲೆ ಮಹದೇಶ್ವರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ಮಾಡುವ ಮುಖಾಂತರ ಶ್ರಮದಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಮಹಾನಗರ…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ ಮಾಜಿ ಸಚಿವ ಹರತಾಳು ಹಾಲಪ್ಪ  ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ. ಮಂಜಮ್ಮನವರಿಗೆ 12 ಮಕ್ಕಳಿದ್ಫ಼ು , 9 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹೊಳೆಕೊಪ್ಪದಲ್ಲಿ ನೆರವೇರಲಿದೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ. ಮಂಜಮ್ಮನವರ ಬದುಕು ಸರಳತೆ, ಮೌಲ್ಯಗಳು ಮತ್ತು ಕುಟುಂಬದ ಒಗ್ಗಟ್ಟಿನಿಂದ ಕೂಡಿದ್ದು, ಮಕ್ಕಳಿಗೆ ಸದಾ ಪ್ರೇರಣೆಯಾಗಿತ್ತು. ಹರತಾಳು…

Read More

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಬೀದಿಗಿಳಿದ ಜಿಲ್ಲಾ ಕಾಂಗ್ರೆಸ್ :

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More
Exit mobile version