Headlines

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More