Headlines

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ. ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್  ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಾಹಿತಿ: ಇಮ್ರಾನ್ ಸಾಗರ್

Read More

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.  ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…

Read More

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪಿಎಸ್‌ಐ ಕೆ ವೈ ನಿಂಗರಾಜು ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More

ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.

ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು. ಶಿವಮೊಗ್ಗ…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಹೃದಯಘಾತದಿಂದ ನಿಧನ

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಎಂ. ಬಿ.(76) ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹೊನ್ನಪ್ಪ ರವರು ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ.ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಅರಸಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು…

Read More

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರಿಗೆ ಹೊಂಬುಜ ಮಠದಿಂದ “ಸಮಾಜಭೂಷಣ” ಗೌರವ – 75 ನೇ ಜನ್ಮದಿನಾಚರಣೆಗೆ ಶುಭ ಹಾರೈಕೆ

ಹೊಂಬುಜ : ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರೀಯ ಮಾಜಿ ಶಾಸಕರು ಹಾಗೂ ಕರ್ನಾಟಕ ಘನ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿ, ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ…

Read More