Headlines

ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town

ಜನಹಿತಕ್ಕಾಗಿ ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ­ವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು. ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara

ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…

Read More

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…

Read More

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read More

ಇನ್ಶುರೆನ್ಸ್‌ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?

ಇನ್ಶುರೆನ್ಸ್‌ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?Tahsildar’s vehicle running without insurance!? ಸಾರ್ವಜನಿಕರ ವಾಹನಕ್ಕೆ ಒಂದು ನ್ಯಾಯ – ಸರ್ಕಾರಿ ವಾಹನಕ್ಕೆ ಒಂದು ನ್ಯಾಯ.! ಇದು ಸರಿಯೇ ? ಸಾರ್ವಜನಿಕರ ಪ್ರಶ್ನೆ? ತೀರ್ಥಹಳ್ಳಿ(Thirthahalli) : ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ ಆದರೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ಯಡಿಯೂರಪ್ಪ ಹುಟ್ಟುಹಬ್ಬ: 79 ಕೆಜಿ ಕೇಕ್​ ಕತ್ತರಿಸಿ ಅಭಿಮಾನಿಗಳ ಸಂತಸ ಹೆಚ್ಚಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಭಾನುವಾರ ಸರಳವಾಗಿ ಆಚರಿಸಿದರು. ಗಣ್ಯರು, ಅಭಿಮಾನಿಗಳು ಬಿಎಸ್​ವೈ ಅವರಿಗೆ ಶೂಭಕೋರಿದ್ದಾರೆ. ಬೆಂಗಳೂರಲ್ಲಿ ಬಿಎಸ್​ವೈ ಬೃಹತ್​ ಕೇಕ್​ ಕತ್ತರಿಸಿದರು. ತವರು ಕ್ಷೇತ್ರ ಶಿಕಾರಿಪುರ, ಶಿರಾಳಕೊಪ್ಪ, ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಬಿಎಸ್​ವೈ ಅಭಿಮಾನಿಗಳು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. 79 ಕೆಜಿ ತೂಕದ ಕೇಕ್ ಕತ್ತರಿಸಿದ ಬಿಎಸ್‌ವೈ:  ಬಿಎಸ್‌ವೈ 79ನೇ ಜನ್ಮ ದಿನದ ನಿಮಿತ್ತ 79 ಕೆ.ಜಿ. ತೂಕದ ಕೇಕ್‌ ಅನ್ನು ಕಾವೇರಿ…

Read More

ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba

ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು.  ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…

Read More