Headlines

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ ರಿಪ್ಪನ್‌ಪೇಟೆ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಕೆರೆಹಳ್ಳಿ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ವಿಬಿ–ಜಿ ರಾಮ್ ಜಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ…

Read More

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 ಕಿ ಮೀ ಏಕಾಂಗಿ ಯಾತ್ರೆ

ಶಿವಮೊಗ್ಗ  : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರುವ 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 ಕಿ ಮೀ  ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ, ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್‌ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು. ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ…

Read More