Headlines

ಅದ್ದೂರಿಯಾಗಿ ಜರುಗಿದ ಕೆಂಚನಾಲ ಉರೂಸ್ ಕಾರ್ಯಕ್ರಮ :

ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು…

Read More

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ A 35-year-old nurse from Shivamogga died by suicide after jumping from a bridge into the Tunga River near Muduba in N.R. Pura taluk of Chikkamagaluru district. Police have registered a case and investigation is ongoing. ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಮುಡುಬ ಬಳಿ ದುರ್ಘಟನೆ ಸಂಭವಿಸಿದ್ದು, ನರ್ಸ್ ಆಗಿ ಕೆಲಸ ಮಾಡುತ್ತಿದ್ದ…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು

Student drowns while swimming with friends ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು Student drowns while swimming with friends Shivamogga: A student who had gone for a swim in the Tunga River near Pillangiri village in the taluk drowned and died in a tragic incident. ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ…

Read More

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ  ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

ಬಸವಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮ::

ರಿಪ್ಪನ್ ಪೇಟೆ:ಇಲ್ಲಿಗೆ ಸಮೀಪದ ಬಸವಾಪುರ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ,ಅರಣ್ಯ ಇಲಾಖೆ, ಹಾಗೂ ಸ್ಥಳೀಯ ದೇವಸ್ಥಾನ ಸಮಿತಿಯವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪರಿಸರದ ಅಳಿವು-ಉಳಿವು  ಮುಂದಿನ ಪೀಳಿಗೆಗೆ ಪರಿಸರ ಅಗತ್ಯತೆ ಏನು? ಎಂಬುದರ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಿಳಿಸಿಕೊಡಲಾಯಿತು. ಈ ಸಮಾರಂಭದಲ್ಲಿ ಗ್ರಾ.ಪಂ.ಸದಸ್ಯರಾದ ದೇವರಾಜ್,  ಶಾಂತಕುಮಾರಿ, ಒಕ್ಕೂಟದ ಅಧ್ಯಕ್ಷರಾದ ಅಶೋಕ್, ವಲಯ ಮೇಲ್ವಿಚಾರಕ ನಾಗೇಶ್, ಸೇವಾ ಪ್ರತಿನಿಧಿ ವಸಂತ , ಅರಣ್ಯ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ: ಡಿಕೆಶಿ

ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ‌ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ‌ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ‌…

Read More

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More