ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.  ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್‌ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್‌…

Read More

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…

Read More

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್!

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್! A man from Andhra Pradesh was arrested by Shivamogga Cyber Crime Police for allegedly impersonating a Lokayukta officer and demanding money from a PWD Assistant Executive Engineer to close a case. ಶಿವಮೊಗ್ಗ, ಜೂನ್ 24: ತಾನು ಲೋಕಾಯುಕ್ತ ಬೆಂಗಳೂರು ಮುಖ್ಯ ಕಚೇರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗೆ…

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More