Headlines

ಶಿವಮೊಗ್ಗ : ನೇಣು ಬಿಗಿದುಕೊಂಡು ಶಿವಮೊಗ್ಗದ ATNCC ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ  : ಕಾಶೀಪುರದಲ್ಲಿ ಪದವಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಹರ್ಷ ಎಟಿಎನ್ ಸಿಸಿ ಕಾಲೇಜಿನಲ್ಲಿ ಅಂತಿಮ‌ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹರ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಕಾಶೀಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿದ್ದಾರೆ.

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ  ಘಟನೆ ನಡೆದಿದೆ.  ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಈ  ಕಾರು ಸೇರಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿ, ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ- ಸಿಬ್ಬಂದಿ ಬೆಂಕಿಯನ್ನ ಆರಿಸಲು ಯತ್ನಿಸಿದ್ದಾರೆ.  ಕಾರಿನ…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು A case has been registered in Thirthahalli after unknown persons allegedly poisoned a drinking water well in Giniya village near Kuppalli, reportedly due to a land dispute. ತೀರ್ಥಹಳ್ಳಿ: ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More