Headlines

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read More

ಹಿಜಾಬ್ ಪ್ರಕರಣ : ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯದೀಶರು : ಮುಂದಿನ ಆದೇಶದವರೆಗೂ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಧಿರಿಸು ಧರಿಸುವಂತಿಲ್ಲ

 ಮುಸ್ಲಿಮ್ ವಿದ್ಯಾರ್ಥಿನಿಯರು ಧರಿಸುತ್ತಿದ್ದ ಹಿಜಾಬ್ ಮೇಲೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ನಡೆಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ವಿಚಾರಣೆ ಮುಗಿಯುವವರೆಗೆ ಯಾವುದೇ ಧಾರ್ಮಿಕ ಉಡುಪನ್ನು ಬಳಸಬಾರದು ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ, ರಾಜ್ಯದಲ್ಲಿ ಶಾಂತಿ, ನೆಮ್ಮದಿ ಕಾಪಾಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ವಾದ ಮಂಡಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗಡೆ , ಕಳೆದ ವರ್ಷದ ಸೆಪ್ಟೆಂಬರ್…

Read More

ಬರ್ತ್ ಡೇ ಪಾರ್ಟಿಯಲ್ಲಿ ನಾಲ್ವರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಪ್ರಕರಣ ದಾಖಲು|assault

ಭದ್ರಾವತಿಯಲ್ಲಿ  ಹುಟ್ಟುಹಬ್ಬದ ಪಾರ್ಟಿ ವೇಳೆ ಯುವಕರ ಗುಂಪಿನ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ನಾಲ್ವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಭದ್ರಾವತಿಯ ಸಾಗರ, ನಾಗ ಪವನ್, ತೇಜಸ್, ಚೇತನ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೇಜಸ್ ಎಂಬುವವರ ಸ್ನೇಹಿತರೊಬ್ಬರ ಪತ್ನಿಯ ಹುಟ್ಟುಹಬ್ಬದ ಪಾರ್ಟಿಯನ್ನು ಶಿವಮೊಗ್ಗದ ಸೋಷಿಯಲ್ ಹಾರ್ಬರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು. ರಾತ್ರಿ 11.30ರ ಹೊತ್ತಿಗೆ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಗುಂಪೊಂದು ಏಕಾಏಕಿ ಚೇತನ್ ಎಂಬಾತನ ಮೇಲೆ ಹಲ್ಲೆ ನಡೆಸಲು…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್!

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್! A man from Andhra Pradesh was arrested by Shivamogga Cyber Crime Police for allegedly impersonating a Lokayukta officer and demanding money from a PWD Assistant Executive Engineer to close a case. ಶಿವಮೊಗ್ಗ, ಜೂನ್ 24: ತಾನು ಲೋಕಾಯುಕ್ತ ಬೆಂಗಳೂರು ಮುಖ್ಯ ಕಚೇರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗೆ…

Read More

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ : ತಲವಾರ್,ಡ್ರ್ಯಾಗರ್ ಗಳು ಪತ್ತೆ

ಶಿವಮೊಗ್ಗ ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪವಾಗಿ ಓಡಾಡುವ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮನೆಗಳ ಮೇಲೆ ಪೊಲೀಸರು ದಾಳಿ‌ ನಡೆಸಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ನಿರ್ಜನ‌ ಪ್ರದೇಶದಲ್ಲಿ ಕುಡಿದು ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅವರ ವಿರುದ್ಧ 11 ಅಬಕಾರಿ ಪ್ರಕರಣ, 350 ಸಂಚಾರಿ…

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More