ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft
ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….