ಐಟಿ ಕಚೇರಿಗೆ ಮುತ್ತಿಗೆ ಯತ್ನ: ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು
ಶಿವಮೊಗ್ಗ: ರಾಹುಲ್ ಗಾಂಧಿ ಮೇಲೆ ಕೇಂದ್ರ ಸರ್ಕಾರ ವೈಯಕ್ತಿಕ ದ್ವೇಷದಿಂದ ಇಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆದಾಯ ತೆರಿಗೆ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಬಿಜೆಪಿ ಸರ್ಕಾರವು ಸೋನಿಯಾ ಗಾಂಧಿ ಅವರ ಕುಟುಂಬವನ್ನು ಟಾರ್ಗೆಟ್ ಮಾಡಿ, ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಇಡಿ ನೋಟಿಸ್…