Headlines

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ‌ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಇತ್ತೀಚೆಗೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ “ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು” ಎಂಬ ಅಡಿಬರಹದಲ್ಲಿ ವಿಸ್ಕೃತವಾದ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕೂಡಲೇ…

Read More

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ಬೆನವಳ್ಳಿ ಕಟ್ಟುಕೋವಿ(gunshot) ಪ್ರಕರಣ ಮತ್ತೆ ಮುನ್ನಲೆಗೆ – ಮರು ತನಿಖೆಗೆ ಚಾಲನೆ ನೀಡಿದರಾ ಪಿಎಸ್‌ಐ ಪ್ರವೀಣ್ .??

ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 2020 ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಗನ್ ಶಾಟ್(gunshot) ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪಟ್ಟಣದ ಖಡಕ್ ಪಿಎಸ್‌ಐ ಪ್ರವೀಣ್ ಎಸ್ ಪಿ ಈ ಪ್ರಕರಣದ ಮರು ತನಿಖೆ ನಡೆಸುತಿದ್ದಾರೆ ಎಂದು ತಿಳಿದುಬಂದಿದೆ. 2020 ರ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಕಾಲು ಕಳೆದುಕೊಂಡಿದ್ದನು,ಈ ಪ್ರಕರಣದ ಆರೋಪಿಗಳ ವಿರುದ್ದ…

Read More

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…

Read More

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್|zero traffic

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್ ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…

Read More

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ|arrested

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ ತೀರ್ಥಹಳ್ಳಿ:  ಪಟ್ಟಣದ ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಡೆಹಳ್ಳಿ ಕೆರೆ ಸರ್ಕಲ್ ಹತ್ತಿರ ಯಾರೋ ಎರಡು ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಗಾಂಜಾ ಮಾರಾಟ ಮಾಡುತಿದ್ದ ಸಂಜಯ್  ಮತ್ತು  ಸುದೀಪ್….

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More