Headlines

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ…

Read More

ಆನಂದಪುರದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ | ಹೊಸನಗರದಲ್ಲಿ ಹೆಜ್ಜೇನು ದಾಳಿ|CRIME NEWS

ಸಾಗರ :  ತಾಲೂಕಿನ ಆನಂದಪುರದ ಗಾಣಿಗನ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆನಂದಪುರದ ಜೆಡಿಸರ ಹೋಗುವ ರಸ್ತೆಯ ಕೆರೆಯ ಬಳಿ ಇದೀಗ ಮಹಿಳೆಯ ಶವ ಪತ್ತೆಯಾಗಿದೆ.ಮೃತ ಮಹಿಳೆ ಸಿದ್ದೇಶ್ವರ ಕಾಲೋನಿಯ ನಿವಾಸಿಯಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದರು. ಇದೀಗ ಗಾಣಿಗನ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಸಾವಿಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೇನು ದಾಳಿ – ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ…

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet

“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್‌ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ  ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ  ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…

Read More

ತೀರ್ಥಹಳ್ಳಿ ಪಟ್ಟಣದ ತುಡ್ಕಿಯಲ್ಲಿ ಕಾಣಿಸಿಕೊಂಡ ಚಿರತೆ – ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ|leopard

ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ. ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು…

Read More

ಶಿವಮೊಗ್ಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕರಾಗಿ ಬಿ ಟಿ ಹಾಲೇಶ್ ಅಧಿಕಾರ ಸ್ವೀಕಾರ|district news

ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರನ್ನಾಗಿ ಬಿ ಟಿ ಹಾಲೇಶ್ ರವರನ್ನು ವರ್ಗಾವಣೆಗೊಳಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಮೂಲತಃ ಭದ್ರಾವತಿಯ ಬಿ ಟಿ ಹಾಲೇಶ್  ಸಾಗರ ವಿಭಾಗೀಯ ಕಚೇರಿಯಲ್ಲಿ ಕೆಲವು ವರ್ಷಗಳ ಕಾಲ ಸೇವೆ ಮಾಡಿರುತ್ತಾರೆ.ನಂತರ ಹಾಸನ ಜಿಲ್ಲೆಗೆ ಪದೋನ್ನತಿ ಹೊಂದಿ ಅಲ್ಲಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಸದರಿ ಶಿವಮೊಗ್ಗ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿ…

Read More
Exit mobile version