Headlines

ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet

ರಿಪ್ಪನ್‌ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…

Read More

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More

ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನ :

ರಿಪ್ಪನ್‌ಪೇಟೆ : ರಾಷ್ಟ್ರ ಮಟ್ಟದ ಹಾಕಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರಿ ಮಿಂಚುತ್ತಿರುವ ಪಟ್ಟಣದ ಬರುವೆ ಗ್ರಾಮದ ಅಪ್ರತಿಮ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ…

Read More

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನ : ಶಿವಮೊಗ್ಗದಲ್ಲೊಂದು ವಿಚಿತ್ರ ಘಟನೆ!!!theft

ಶಿವಮೊಗ್ಗ : ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ. 100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ಎಸ್ ಎಸ್ ಎಲ್ ಸಿ ಪಲಿತಾಂಶ : 625 ಕ್ಕೆ 625 ಪಡೆದ 11 ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರದ್ದೇ ಮೇಲುಗೈ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ಮೂಲಕ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಶೇ.84.60 ಫಲಿತಾಂಶ ದೊರೆತಿದ್ದು ಎ ಗ್ರೇಡ್ ಸ್ಥಾನ ದೊರೆತಿದೆ. ಅದರಂತೆ ಜಿಲ್ಲೆಯಲ್ಲಿ ಒಟ್ಟು 23136 ಜನ‌ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 19574 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.  ಜಿಲ್ಲೆಯ 7 ತಾಲೂಕಿನ ಫಲಿತಾಂಶ ಇಂತಿದೆ: ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ 1654 ವಿದ್ಯಾರ್ಥಿಗಳಲ್ಲಿ 1516 ಜನ ಮಕ್ಕಳು ತೇರ್ಗಡೆಯಾಗಿದ್ದು ಶೇ.91.66 ರಷ್ಟು ಫಲಿತಾಂಶ ಬಂದಿದೆ. ಜಿಲ್ಲೆಯಲ್ಲಿ ತೀರ್ಥಹಳ್ಳಿ ಅತಿ ಹೆಚ್ಚು ಅಂಕಪಡೆದ ತಾಲೂಕಾಗಿದೆ. ಹೊಸನಗರ…

Read More

ನರಿಯನ್ನು ಭೇಟೆಯಾಡಿದ ಭಾರಿ ಗಾತ್ರದ ಹೆಬ್ಬಾವು|python

ನರಿಯನ್ನು ಹಿಡಿದ ಹೆಬ್ಬಾವು…!  ಸಾಗರ: ಹೆಬ್ಬಾವೊಂದು ನರಿಯನ್ನು ಹಿಡಿದ ಘಟನೆ ಐ. ಟಿ. ಐ ಕಾಲೇಜ್ ಹತ್ತಿರ ನಡೆದಿದ್ದು, ಹೆಬ್ಬಾವು ನರಿಯನ್ನು ಹಿಡಿದಿರುವ ದೃಶ್ಯ ವೈರಲಾಗಿದೆ. ತಾಲೂಕಿನ ರಾಮನಗರದ ಸಮೀಪದ ಐ. ಟಿ. ಐ ಕಾಲೇಜ್ ಸಮೀಪ ಹೆಬ್ಬಾವು ನರಿಯನ್ನು ಹಿಡಿದು ತನ್ನ ದೇಹದಿಂದ ಸುತ್ತಿಕೊಂಡು ಸಾಯಿಸಿದೆ. ಇದನ್ನು ಸ್ಥಳೀಯರು ನೋಡಿ ಸ್ನೇಕ್ ಅನುಪ ಅವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳ ಜೊತೆಗೆ ಆಗಮಿಸಿ ಹೆಬ್ಬಾವಿನ ರಕ್ಷಣೆ ಮಾಡಿದ್ದಾರೆ. ನಂತರ ಹೆಬ್ಬಾವನ್ನು ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.

Read More

Ripponpete | ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು ಆ ಮೂಲಕ ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು. ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ…

Read More
Exit mobile version