Headlines

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More

ಶಿವಮೊಗ್ಗ ಬಾಪೂಜಿ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ :

ಶಿವಮೊಗ್ಗ :  ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.  ಇಂದು ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು.ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ….

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಭದ್ರಾವತಿ : KSRTC ಬಸ್ ನಿಲ್ದಾಣಕ್ಕೆ ಎಂ ಜೆ ಅಪ್ಪಾಜಿ ಹೆಸರಿಡಲು ಆಗ್ರಹ

ಭದ್ರಾವತಿ: ನಗರದ ಕೆಎಸ್‌ಆರ್‌ ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿ: ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣ ಗೊಳಿಸುವಂತೆ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾ ಣಕ್ಕೆ ಅಗತ್ಯವಿರುವ  ಅನುದಾನ ಶೀಘ್ರ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಸಚಿವ ಕೆ.ಎಸ್ ಈಶ್ವರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮೂರು ಬಾರಿ ಶಾಸಕರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಎಲ್ಲಾ ವರ್ಗದ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿರುವ ದಿ: ಎಂ.ಜೆ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಬೆಚ್ಚಿಬಿದ್ದ ಮರಳು ಮಾಫಿಯಾದವರು……! ಮರಳು ಸಂಗ್ರಹಿಸುವ ಪರಿಕರಗಳೊಂದಿಗೆ ಗವಟೂರು ಹೊಳೆಯ ದಡದಿಂದ ಎಸ್ಕೇಪ್ …!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಶರ್ಮಿಣ್ಯಾವತಿ ನದಿಯ (ಗವಟೂರು ಹೊಳೆ) ದಡದಲ್ಲಿ ಲಕ್ಷಾಂತರ ರೂಪಾಯಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮರಳು ಮಾಫಿಯಾದ ವಿರುದ್ಧ ಭಾನುವಾರ ಪೋಸ್ಟ್ ಮ್ಯಾನ್ ವರದಿ ಮಾಡಿತ್ತು. ಇದನ್ನು ಗಮನಿಸಿದ ಮರಳು ಮಾಫಿಯಾದವರು ಹಾಗೂ ಮರಳು ದಂಧೆಕೋರರು ಮರಳು ಸಂಗ್ರಹಣೆಗಾಗಿ ತಂದಿಟ್ಟಿದ್ದ ಪರಿಕರಗಳನ್ನು ತೆಗೆದುಕೊಂಡು ಕೆಲಸಗಾರರೊಂದಿಗೆ ಎಸ್ಕೇಪ್  ಆಗಿದ್ದಾರೆ. ರಿಪ್ಪನ್ ಪೇಟೆಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಗವಟೂರು ಹೊಳೆಯಲ್ಲಿ ಮರಳು ಮಾಫಿಯಾದವರು ಮರಳು ಸಂಗ್ರಹ ಮಾಡುತ್ತಿರುವ ವಿಷಯ ಕಂದಾಯ,ಅರಣ್ಯ, ಪೊಲೀಸ್,ಭೂ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ ಸಾಗರ : ‌ಇಲ್ಲಿನ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರದ ಉಪ ಕಾರ್ಯದರ್ಶಿ ಯುಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಲ್ಲವಿ ಸಾತೇನಹಳ್ಳಿ ರವರ ಸ್ಥಾನಕ್ಕೆ ಮಹೇಶ್ ಜೆ ರವರನ್ನು ನೂತನ ಉಪ ವಿಭಾಗಧಿಕಾರಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಸಾತೇನಹಳ್ಳಿ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಪಿಆರ್ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ…

Read More