Headlines

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ಕಾಡು ಹಂದಿ ಭೇಟೆ : ಮಾಂಸ ಸಹಿತ ಐವರ ಬಂಧನ

ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ನಡೆದಿದೆ. ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read More

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…

Read More

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ಹಣಗೆರೆಕಟ್ಟೆಯ ಖಾಸಗಿ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಹತ್ಯೆ.!! | Crime News

ಖಾಸಗಿ ವಸತಿ ಗೃಹವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಪ್ರಸಿದ್ಧ ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದ ವಸತಿಗೃಹವೊಂದರಲ್ಲಿ 30 ವರ್ಷದ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಯುವಕ ಹಾಗೂ ಯುವತಿ ಬಂದು ಕೇಳಿದಾಗ ಬಾಡಿಗೆಗೆ ರೂಮನ್ನು ನೀಡಲಾಗಿದೆ. ಎಂದು ಕೆಲಸದವರು…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru

ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು‌ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…

Read More

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು ‌. ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ  ಜೆ  ಪದ್ಮನಾಭ ಅವರುಗಳ ಹೆಸರು ಕೂಡ…

Read More