Headlines

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ  ಪ್ರಶಾಂತ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ವರ್ಷದ ಹಿಂದೆ ಪತ್ನಿಯಿಂದ ವಿಚ್ಚೆದನವಾಗಿತ್ತು ಎನ್ನಲಾಗುತ್ತಿದೆ.

Read More

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …

Read More

ತ್ಯಾಗರ್ತಿ ಬಳಿ ಭೀಕರ ರಸ್ತೆ ಅಪಘಾತ – ಸಾಗರ ನಗರಸಭೆ ಮಾಜಿ ಅಧ್ಯಕ್ಷ ಸೇರಿದಂತೆ ಮೂವರಿಗೆ ಗಂಭೀರ ಗಾಯ|Accident

ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ. ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು,…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ಅಂಧ ವ್ಯಕ್ತಿಗೆ ಕೆಲಸ ಕೊಡಿಸುವುದಾಗಿ ಪತ್ರಕರ್ತನಿಂದ ವಂಚನೆ ಆರೋಪ

ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್‌ಗೆ ನಗರಸಭೆಯಲ್ಲಿ  ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ  2 ಲಕ್ಷ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More