ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ಸಕ್ರೆಬೈಲು ಆನೆ ಬಿಡಾರದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ : ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಅವರು ಇವತ್ತು ಭೇಟಿ ನೀಡಿದ್ದಾರೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಅಭಿಮಾನಿಗಳು ಆನೆ ಬಿಡಾರದ ಬಳಿ ಸೇರಿದ್ದರು.ಮಧ್ಯಾಹ್ನ ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ಕಾರ್ಯ ನಡೆಸಲಾಯಿತು. ಚಿತ್ರೀಕರಣ ನಡೆಯುತ್ತಿದ್ದ ಕಾರಣಕ್ಕೆ ಕ್ರಾಲ್ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು…

Read More

Ripponpete |ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ  ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಷತ್ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಅತಿ ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸಿದ್ದು ಪ್ರತಿಯೊಬ್ಬ ಘಟ ನಾಯಕರು …

Read More

ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB

ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…

Read More

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident

ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.  ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.  ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…

Read More

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…

Read More

ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು  ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…

Read More

ರೈಲಿಗೆ ಸಿಲುಕಿ 30ಕ್ಕೂ ಹೆಚ್ಚು ಕುರಿಗಳು ಸಾವು :

ಭದ್ರಾವತಿ ನಗರದ ಅಪ್ಪಾಜಿ ಗೌಡ ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ರೈಲ್ವೆ ಹಳಿಯಲ್ಲಿ 30 ಕ್ಕೂ ಹೆಚ್ಚು ಕುರಿಗಳ ಮಾರಣ ಹೋಮ ನಡೆದಿದೆ. ರೈಲಿಗೆ ಸಿಲುಕಿ ಕುರಿಗಳು ಸಾವನ್ನಪ್ಪಿವೆ. ತಾಳಗುಪ್ಪ ಮೈಸೂರು ರೈಲು ಬರುವ ವೇಳೆ ಹಳಿ ದಾಟುವಾಗ ಕುರಿಗಳ ಮೇಲೆ ರೈಲು ಹರಿದಿದೆ. 30ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿಯೇ ಸತ್ತಿದ್ದು, ಕೆಲ ಕುರಿಗಳು ಜೀವನ್ಮರಣಗಳ ನಡುವೆ ಬಿದ್ದು ಒದ್ದಾಡುತ್ತಿದ್ದವು. ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಎಕ್ಸಪ್ರೆಸ್ ರೈಲಿಗೆ ಕುರಿಗಳು ಸಿಲುಕಿವೆ.ಹಾವೇರಿ ಸವಣೂರಿನ ವ್ಯಕ್ತಿಯೋರ್ವರಿಗೆ ಈ ಕುರಿಗಳು  ಸೇರಿದ್ದು ಎನ್ನಲಾಗಿದೆ.

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More